ಶ್ರೀ ಹಾಲು ಮರದ ಚೌಡಮ್ಮ ದೇವಿಗೆ ಮಹಾರುದ್ರಾಭಿಷೇಕ, ವಿಶೇಷ ಅಲಂಕಾರ
Watch on:
▶️ YouTube
ಕೆ. ಬೇವಿನಹಳ್ಳಿ, ಸೆ. 5: ಹರಿಹರ ತಾಲ್ಲೂಕಿನ ಕೆ. ಬೇವಿನಹಳ್ಳಿ ಗ್ರಾಮದ ದೇವತೆ ಹಾಲು ಮರದ ಶ್ರೀ ಚೌಡಮ್ಮ ದೇವಿಗೆ ಶುಕ್ರವಾರ ಮಹಾರುದ್ರಾಭಿಷೇಕ ಹಾಗೂ ವಿಶೇಷ ಅಲಂಕಾರ ಸೇವೆಯನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ದೇವಿಗೆ ಮಹಾರುದ್ರಾಭಿಷೇಕ ನೆರವೇರಿಸಿ, ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಲಾಯಿತು. ಬಳಿಕ ಭಕ್ತರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ನಂತರ ದೇವಾಲಯಕ್ಕೆ ಆಗಮಿಸಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು, ಭಕ್ತರು, ಮಹಿಳೆಯರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ದೇವಿಗೆ ಮಹಾರುದ್ರಾಭಿಷೇಕ ನೆರವೇರಿಸಿ, ವಿವಿಧ ಪುಷ್ಪಗಳಿಂದ ವಿಶೇಷ ಅಲಂಕಾರ ಮಾಡಲಾಯಿತು. ಬಳಿಕ ಭಕ್ತರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ನಂತರ ದೇವಾಲಯಕ್ಕೆ ಆಗಮಿಸಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು, ಭಕ್ತರು, ಮಹಿಳೆಯರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.